ರಾಜ್ಯ ಸರ್ಕಾರದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ರಾಜ್ಯಾದ್ಯಂತ ಸಮೀಕ್ಷೆ ಆರಂಭವಾಗಿದೆ. ಈ ನಡುವೆ ಸಮೀಕ್ಷೆಗೆ ನಡೆಸಬೇಕಾದ ಶಿಕ್ಷಕರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪ್ಡಿಸಿ ಪ್ರತಿಭಟನೆ ನಡೆಸಿದ್ದಾರೆ.ಅಂಗವಿಕಲ ಶಿಕ್ಷಕರನ್ನು, ನಿವೃತ್ತಿಯಾಗಿರುವ ಶಿಕ್ಷಕರನ್ನೂ, ಅಪಾಘಾತದಲ್ಲಿ ಕಾಲು ಸಮಸ್ಯೆಯಿಂದಾಗಿ ನಡೆದಾಡಲು ಸಾಧ್ಯವಾಗದಂತಹ ಶಿಕ್ಷಕರನ್ನು, 6 ತಿಂಗಳ ಅಂಗವಿಕಲ ಗರ್ಭಿಣಿ, ನಿವೃತ್ತಿ ಅಂಚನಲ್ಲಿರುವ ಶಿಕ್ಷಕರನ್ನು, ಅನಾರೋಗ್ಯದಿಂದ ರಜೆ ಹಾಕಿರುವ ಶಿಕ್ಷಕರನ್ನು, ಗರ್ಭಿಣಿ ಶಿಕ್ಷಕಿಯರನ್ನೂ ಸರ್ವೆ ಕೆಲಸಕ್ಕೆ ನೇಮಿಸಿದ್ದು, ಸರ್ಕಾರದ ಈ ನಡೆ ಖಂಡಿಸಿ ಸರ್ವೆ ಕಾರ್ಯ ಬಿಟ್ಟು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

