ಪ್ರೀತಿಸಿ ಮದುವೆಯಾಗಿದ್ದಕ್ಕಾಗಿ ಪೋಷಕರಿಂದ ನಿರ್ಲಕ್ಷ್ಯಕ್ಕೊಳಗಾದ ಜೋಡಿ ಬೀದಿಗೆ ಬಂದಿದ್ದರು. ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ಜೋಡಿಗೆ, ತಮ್ಮ ಪ್ರೀತಿಯ ಸಂಕೇತವಾಗಿದ್ದ ಗರ್ಭದಲ್ಲಿದ್ದ ತ್ರಿವಳಿ ಕಂದಮ್ಮಗಳಿಗೆ ಸಮರ್ಪಕ ತಪಾಸಣೆ ಹಾಗೂ ಚಿಕಿತ್ಸೆ ದೊರೆಯದೆ ತಾಯಿ ಗರ್ಭದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗೊಲ್ಲಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.ಬಡತನ, ಅಜ್ಞಾನ ಮತ್ತು ವೈದ್ಯಕೀಯ ಸೇವೆಗಳ ನಿರ್ಲಕ್ಷ್ಯ ಈ ದುರಂತಕ್ಕೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

