ತುಮಕೂರು ಜಿಲ್ಲೆಯ ಶಿರಾ ಮೂಲದ ರೇಖಾ ಎಂಬ ಮಹಿಳೆಯನ್ನು ಆರೋಪಿ ಲೋಕೇಶ್ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆ ಗಂಡನನ್ನು ಬಿಟ್ಟು ಎರಡು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ರೇಖಾ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ರೇಖಾ ಕೆಲಸ ಮಾಡುತ್ತಿದ್ದರು.ಸೋಮವಾರ ಸುಂಕದಕಟ್ಟೆ ಬಸ್ ನಿಲ್ದಾಣಕ್ಕೆ ಬರುವಂತೆ ಲೋಕೇಶ್ ರೇಖಾಗೆ ಸೂಚನೆ ನೀಡಿದ್ದನು. ಆಕೆ ತನ್ನ ಮಗಳ ಜೊತೆಗೆ ಬರುತ್ತಿದ್ದಂತೆ ಸಾರ್ವಜನಿಕರ ಮಧ್ಯದಲ್ಲಿಯೇ 9 ಬಾರಿ ಚಾಕು ಇರಿದು ಪರಾರಿಯಾಗಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಮೃತಾಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

