ಮದುವೆಗೆ ಸಿದ್ಧವಾಗಿದ್ದ ಮದುಮಗಳನ್ನು ಬರ್ಬರವಾಗಿ ಕೊಲೆಮಾಡಿ, ಆಕೆಯ ದೇಹವನ್ನು ಸುಟ್ಟ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಅಂಶಿಕಾ ಠಾಕೂರ್ ಎಂದು ಗುರುತಿಸಲಾಗಿದ್ದು, ಈಕೆ ಬೈರಿಯನ್ ನಿವಾಸಿಯಾಗಿದ್ದು, ದಿವಂಗತ ವಿಪಿನ್ ಠಾಕೂರ್ ಅವರ ಪುತ್ರಿ.ಸೆಪ್ಟೆಂಬರ್ 24 ರ ಬುಧವಾರದಂದು ಭಿಂಡ್ಲಾ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಅಂಶಿಕಾಳ ದೇಹ ಸುಟ್ಟು ಕರಕಲಾಗಿದ್ದಲ್ಲದೆ, ಆಕೆಯ ಮುಖ ಮತ್ತು ಕುತ್ತಿಗೆಯ ಮೇಲೆ ಆಳವಾದ ಗಾಯಗಳು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

