ರಾಯಚೂರು ಜಿಲ್ಲೆಯ ಸಿಂಧನೂರಿನ M.D.ಜಹೀದ್ ಭಾಷಾ ಅಲಿಯಾಸ್ ಸೋನು ಎಂಬಾತ ಬಳ್ಳಾರಿಯಲ್ಲಿ ಸುಮಾರು 500ಕ್ಕೂ ಹೆಚ್ಚು ಕಾರುಗಳನ್ನ ಬಾಡಿಗೆಗೆ ಪಡೆದಿದ್ದ. ಕಾರುಗಳ ಮಾಲಕರಿಗೆ ಪ್ರತಿ ತಿಂಗಳು 50-60 ಸಾವಿರ ರೂಪಾಯಿಗಳ ವರೆಗೆ ಬಾಡಿಗೆ ನೀಡುವ ಭರವಸೆ ನೀಡಿದ್ದ. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ತಾನು ಹೇಳಿದಂತೆ ಸೋನು ಬಾಡಿಗೆಯನ್ನ ಕಾರುಗಳ ಮಾಲಕರಿಗೆ ಸರಿಯಾಗಿಯೇ ನೀಡ್ತಿದ್ದ. ಆ ಬಳಿಕ ತನ್ನ ನವರಂಗಿ ಆಟ ತೋರಿಸಲು ಈತ ಶುರುಮಾಡಿದ್ದು, ಬಾಡಿಗೆ ಕೇಳಿದ್ರೆ ಒಂದೊಂದೇ ಕತೆ ಹೇಳುತ್ತಿದ್ದ. ಇದು ಹೀಗೆ ಮುಂದುವರಿದು ಮೂರು ತಿಂಗಳವರೆಗಿನ ಬಾಡಿಗೆ ಹಣ ಬಾಕಿಯಾದಾಗ ಕಾರುಗಳ ಮಾಲಕರು ಎಚ್ಚೆತ್ತುಕೊಂಡಿದ್ದಾರೆ. ಕಾರಿನ ಜಿಪಿಎಸ್ ಟ್ರ್ಯಾಕ್ ಮಾಡಿದಾಗ ಅವುಗಳನ್ನು ಅಪರಿಚಿತರ ಬಳಿ ಸೋನು ಗಿರವಿ ಇಟ್ಟಿರೋದು ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

