ಯು ಎಇಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೀರಬೈಲು ನಿವಾಸಿ ತಿಲಕಾನಂದ ಪೂಜಾರಿ ಅವರು ಇತ್ತೀಚೆಗೆ ದುಬೈನಲ್ಲಿ ದುರದೃಷ್ಟಕರವಾಗಿ ಮೃತಪಟ್ಟಿದ್ದರು. ಇದೀಗ ಅವರ ಪಾರ್ಥಿವ ಶರೀರವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ತಂಡದ ನೆರವಿನೊಂದಿಗೆ ಉಪ್ಪಿನಂಗಡಿಯಲ್ಲಿರುವ ಅವರ ಸ್ವಂತ ಊರನ್ನು ತಲುಪಿದೆ.ಮೃತದೇಹವನ್ನು ಸ್ವಂತ ಊರಿಗೆ ಕಳುಹಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಈ ಪ್ರಕ್ರಿಯೆಯ ಫಲವಾಗಿ ಇಂದು ರಾತ್ರಿ ವೇಳೆಗೆ ಮೃತದೇಹವು ಉಪ್ಪಿನಂಗಡಿಗೆ ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

