ಕಾರಿನಿಂದಲೇ ಅಡಿಕೆ ವ್ಯಾಪಾರಿಗೆ ಸೇರಿದ 1 ಕೋಟಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದ ಎಂಟು ಮಂದಿಯ ಒಂದು ದೊಡ್ಡ ಗ್ಯಾಂಗ್ ಅನ್ನು ಬೆಂಗಳೂರಿನ ಹುಳಿಮಾವು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಕೃತ್ಯ ನಡೆದ ಕೇವಲ 15 ನಿಮಿಷದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಾರ್ಯಚರಣೆಯಿಂದಾಗಿ ದರೋಡೆ ಆಗಿದ್ದ ಸಂಪೂರ್ಣ ಹಣ ಪೊಲೀಸರ ಕೈಸೇರಿದೆ. ಬಂಧಿತ ಆರೋಪಿಗಳನ್ನು ನರಸಿಂಹ, ಜೀವನ್, ಕಿಶೋರ್, ವೆಂಕಟರಾಜು, ಚಂದ್ರ ಅಲಿಯಾಸ್ ಚಂದಿರನ್, ಕುಮಾರ್, ರವಿಕಿರಣ್, ಮತ್ತು ನಮನ್ ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

