Breaking News

ಗುಂಡಿಕ್ಕಿ ಯುವಕನ ಬರ್ಬರ ಹತ್ಯೆ : ಕೊಲೆಯ ಭಯಾನಕ ವಿಡಿಯೋ ವೈರಲ್.

ನೆಲದ ಮೇಲೆ ಬಿದ್ದಿದ್ದ ಯುವಕನ ಎದೆಗೆ ಒಂದರ ನಂತರ ಒಂದರಂತೆ ಮೂರು ಗುಂಡುಗಳನ್ನು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಆದಿಲ್ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕಿತರನ್ನು ಹುಡುಕಲು ನಾಲ್ಕು ತಂಡಗಳನ್ನು ನಿಯೋಜಿಸಲಾಗಿದೆ. SWAT ತಂಡವು ಇನ್ನೂ ಯಾವುದೇ ಶಂಕಿತರನ್ನು ಬಂಧಿಸಿಲ್ಲ. ನಗರ ಎಸ್‌ಪಿ ಆಯುಷ್ ವಿಕ್ರಮ್ ಸಿಂಗ್ ಅವರ ಪ್ರಕಾರ, ವೀಡಿಯೊ ಬೆಳಕಿಗೆ ಬಂದಿದೆ ಮತ್ತು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಹುಡುಕಾಟಕ್ಕೆ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಪ್ರಸ್ತುತ, ಆರೋಪಿಗಳ ಹುಡುಕಾಟಕ್ಕಾಗಿ ಹಲವಾರು ಜಿಲ್ಲೆಗಳಲ್ಲಿ ದಾಳಿಗಳು ನಡೆಯುತ್ತಿವೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *