Breaking News

ಸೈನಿಕ ಮೆಸ್‌ನಲ್ಲಿ ಹಲ್ಲೆ: ಇನ್‌ಸ್ಪೆಕ್ಟರ್‌ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ.

ಸೈನಿಕ ಮೆಸ್‌ ಮಾಲೀಕ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಉಪನಗರ ಠಾಣೆ ಇನ್‌ಸ್ಪೆಕ್ಟರ್‌ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಾಜಿ ಸೈನಿಕರ ಸಂಘ, ಕರ್ನಾಟಕ ಕಾನೂನು ವಿದ್ಯಾರ್ಥಿಗಳ ಸಂಘದವರು ಸೋಮವಾರ ಪ್ರತಿಭಟನೆ ನಡೆಸಿದರು.ಗಾಯಾಳು ರಾಮಪ್ಪ ಅವರನ್ನು ಆಸ್ಪತ್ರೆಗೆ ಕರದೊಯ್ಯುವಂತೆ ಅವರ ಪತ್ನಿ ಕೇಳಿದರೂ ಸ್ಪಂದಿಸಿಲ್ಲ. ಮೆಸ್‌ ಬಾಗಿಲು ಮುಚ್ಚಿ ಹಿಂಸೆ ನೀಡಿದ್ದಾರೆ ಎಂದು ದೂರಿದರು.ಬೆಳಗಾವಿ ಜಿಲ್ಲೆ ಮಾಜಿ ಸೈನಿಕ ಸಂಘಟನೆಗಳ ಮಹಾಸಂಘದ ಅಧ್ಯಕ್ಷ ಜಗದಯ್ಯ ಪೂಜೇರಿ, ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ ಕಾಡನ್ನವರ, ಖಜಾಂಚಿ ಸಂತೋಷ ಹಿರೇಮಠ, ಗೌರವಾಧ್ಯಕ್ಷ ರಮೇಶ ಚೌಗಲಾ, ಸಿಖಂಧರ್‌ ನವಲೂರು ಇದ್ದರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *