ಸೈನಿಕ ಮೆಸ್ ಮಾಲೀಕ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಉಪನಗರ ಠಾಣೆ ಇನ್ಸ್ಪೆಕ್ಟರ್ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಾಜಿ ಸೈನಿಕರ ಸಂಘ, ಕರ್ನಾಟಕ ಕಾನೂನು ವಿದ್ಯಾರ್ಥಿಗಳ ಸಂಘದವರು ಸೋಮವಾರ ಪ್ರತಿಭಟನೆ ನಡೆಸಿದರು.ಗಾಯಾಳು ರಾಮಪ್ಪ ಅವರನ್ನು ಆಸ್ಪತ್ರೆಗೆ ಕರದೊಯ್ಯುವಂತೆ ಅವರ ಪತ್ನಿ ಕೇಳಿದರೂ ಸ್ಪಂದಿಸಿಲ್ಲ. ಮೆಸ್ ಬಾಗಿಲು ಮುಚ್ಚಿ ಹಿಂಸೆ ನೀಡಿದ್ದಾರೆ ಎಂದು ದೂರಿದರು.ಬೆಳಗಾವಿ ಜಿಲ್ಲೆ ಮಾಜಿ ಸೈನಿಕ ಸಂಘಟನೆಗಳ ಮಹಾಸಂಘದ ಅಧ್ಯಕ್ಷ ಜಗದಯ್ಯ ಪೂಜೇರಿ, ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ ಕಾಡನ್ನವರ, ಖಜಾಂಚಿ ಸಂತೋಷ ಹಿರೇಮಠ, ಗೌರವಾಧ್ಯಕ್ಷ ರಮೇಶ ಚೌಗಲಾ, ಸಿಖಂಧರ್ ನವಲೂರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

