ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಕಾರ್ತಿಕ್ ನನ್ನು ಹೆಚ್ಚಿನ ವಿಚಾರಣೆಗೆ ಮೈಸೂರಿಗೆ ಕರೆ ತರುತ್ತಿದ್ದಾಗ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದಾರೆ.ಶಂಕಿತ ಕಾರ್ತಿಕ್ನ್ನು ಕೊಳ್ಳೇಗಾಲದಲ್ಲಿ ವಶಕ್ಕೆ ಪಡೆದು ಮೈಸೂರಿಗೆ ಕರೆದುಕೊಂಡು ಬಂದು ಕಾರ್ತಿಕ್ ನ ಊರು ಸಿದ್ದಲಿಂಗ ಪುರಕ್ಕೆ ಕರೆದು ಕೊಂಡು ವಾಪಸ್ ಬರುತ್ತಿದ್ದಾಗ ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಬಲ ಕಾಲಿಗೆ ಗುಂಡು ಹಾರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

