ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೆ.ವೆಂಕಟೇಶ ಕೊಲೆ ಪ್ರಕರಣದ ಆರೋಪಿಗಳನ್ನು ಗುರುವಾರ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.ಭೀಮ್ ಅಲಿಯಾಸ್ ಭರತ್, ಸಲೀಂ, ವಿಜಯ್ ಹಾಗೂ ಧನರಾಜ್ ಬಂಧಿತ ಆರೋಪಿಗಲಾಗಿದ್ದು, ಇದಕ್ಕೂ ಮುನ್ನ ಕೃತ್ಯ ನಡೆದ ಸ್ಥಳ ರಿಲಯನ್ಸ್ ಪಾಯಿಂಟ್ನ ಲೀಲಾವತಿ ಆಸ್ಪತ್ರೆಯ ಬಳಿ ಆರೋಪಿಗಳನ್ನು ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದರು.ತೀವ್ರವಾಗಿ ಗಾಯಗೊಂಡಿದ್ದ ವೆಂಕಟೇಶನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

