Breaking News

ಹಾಸನಾಂಬಾ ಸನ್ನಿಧಿಯಲ್ಲಿ ಡಿಕೆಶಿ ಖಡ್ಗಮಾಲಾ ಸ್ತ್ರೋತ್ರ ಪಠಣೆ, ಪೂಜೆ: ಸಿಎಂ ಗದ್ದುಗೆಗೇರುವ ಪ್ರಶ್ನೆಗೆ ಮಾರ್ಮಿಕ ಉತ್ತರ

ಸಿಎಂ ರೇಸ್‌ನಲ್ಲಿರುವ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರ ಜೊತೆ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ ಸುಮಾರು 15 ನಿಮಿಷ ಆಸೀನರಾಗಿ ವಿಶೇಷ ಪೂಜೆಸಲ್ಲಿಸಿದರು. ಶಕ್ತಿಯುತವಾದ ನಾರಾಯಣಿ ನಮಸ್ಕಾರ ಮಂತ್ರ ಮತ್ತು ಖಡ್ಗಮಾಲಾ ಸ್ತ್ರೋತ್ರ ಪಠಿಸಿದರು. ನಾರಾಯಣಿ ನಮಸ್ಕಾರ ಮಂತ್ರ ದುರ್ಗಾ ಸಪ್ತಸತಿಯ 11ನೇ ಅಧ್ಯಾಯದಲ್ಲಿ ಬರುವ ಮಂತ್ರವಾಗಿದೆ. ಇದು ಅತ್ಯಂತ ಪ್ರಬಲ ಪೂಜೆಯಾಗಿದ್ದು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಚಂಡಿಕಾ ಹೋಮ ಮಾಡುವ ವೇಳೆ ಪಠಿಸುವ ಮಂತ್ರವಾಗಿದೆ. ಸುಮಾರು 5 ನಿಮಿಷಗಳ ಕಾಲ ಡಿಕೆಶಿ ಖಡ್ಗಮಾಲಾ ಸ್ತ್ರೋತ್ರವನ್ನು ಪಠಿಸಿದ್ದಾರೆ.

ಅಷ್ಟೇ ಅಲ್ಲದೆ, ಶತ್ರುವಿನ ಮೇಲೆ ವಿಜಯದ ಸಂಕೇತವಾಗಿ ಮಾಡಿಸುವ ಪೂಜೆ ಕೂಡ ಇದಾಗಿದೆ. ಶತ್ರುವಿನ ಮೇಲೆ ವಿಜಯ ಸಾಧಿಸಲೆಂದು ಮಾಡಲೆಂದು ಈ ಶಕ್ತಿಯುತ ಖಡ್ಗಮಾಲಾ ಸ್ತ್ರೋತ್ರವನ್ನು ಪಠಿಸಲಾಗುತ್ತದೆ. ಡಿಕೆಶಿ ಅವರ ಸೂಚನೆಯಂತೆಯೇ ಅರ್ಚಕರು ಸಂಕಲ್ಪ ವೇಳೆ ಅರ್ಚನೆ ಮಾಡಿ ಈ ಸ್ತ್ರೋತ್ರದ ಮೂಲಕ ಪೂಜೆ ಮಾಡಿದ್ದಾರೆ ಎನ್ನಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *