AI ದುರುಪಯೋಗ ದಿನೇ ದಿನೇ ಹೆಚ್ಚುತ್ತಿದ್ದು, ಇದು ಆತಂಕಕಾರಿ ವಿಷಯವಾಗಿದೆ. ಉತ್ತರ ಪ್ರದೇಶದ ಅಂಬೇಡ್ಕರ್ನಗರದಲ್ಲಿ ಭಗವಾನ್ ರಾಮ ಮತ್ತು ಭಾರತೀಯ ಸಂವಿಧಾನದ ಪ್ರಮುಖ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರನ್ನು ಒಳಗೊಂಡ ಆಕ್ಷೇಪಾರ್ಹ AI-ರಚಿತ ವೀಡಿಯೊವು ಉದ್ವಿಗ್ನತೆಯನ್ನು ಉಂಟುಮಾಡಿದೆ.ಜಲಾಲ್ಪುರದ ಸೆಹ್ರಾ ನಿವಾಸಿ ವಿಜಯ್ ಕುಮಾರ್ ಎಂಬುವವರು ಈ ವಿಡಿಯೋವನ್ನು ಸೃಷ್ಟಿಸಿ ಆನ್ಲೈನ್ನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಇದು ಬಿಜೆಪಿ ಬೆಂಬಲಿಗರು ಮತ್ತು ರಾಮನ ಭಕ್ತರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋವನ್ನು ಗ್ರಾಮಸ್ಥರು ಮತ್ತು ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ರಾಮನ ಭಕ್ತರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

