Breaking News

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಪತಿ ಮಹಾಶಯನೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ನಡೆದಿದೆ.ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತನು (25) ಕೊಲೆಯಾದ ಮಹಿಳೆ. ರಮೇಶ್ ಪತ್ನಿಯನ್ನೇ ಕೊಂದ ಗಂಡ. ರಮೇಶ್ ಹಾಗೂ ತನು 7 ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಮಗನಿದ್ದಾನೆ. ಪತಿ ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು.ತಡರಾತ್ರಿ ಕಡಿದು ಬಂದ ಪತಿ ರಮೇಶ್ ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿದ್ದಾನೆ. ಮನೆಯ ರೂಮ್ ನಲ್ಲಿ ರಕ್ತದ ಮಡುವಲ್ಲಿ ಪತ್ನಿ ತನು ಶವವಾಗಿ ಪತ್ತೆಯಾಗಿದ್ದಾಳೆ. ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About bigtvnews22

Check Also

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಕಾಲೇಜು ಬಳಿ ಮಾರಾಟ: ಆರೋಪಿ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು …

Leave a Reply

Your email address will not be published. Required fields are marked *