Breaking News

ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಕಂಡಕ್ಟರ್ ಆಗಿದ್ದ ಪತ್ನಿಯ ಇರಿದು ಕೊಂದ ಪಾಪಿ ಪತಿ.!

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು,ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಶವ್ವ ಕರೀಕಟ್ಟಿ (34) ಅವರನ್ನು ಅವರ ಪತಿ ನಿಪ್ಪಾಣಿ ಠಾಣೆ ಕಾನ್ಸ್ಟೆಬಲ್ ಸಂತೋಷ ಕಾಂಬಳೆ (35) ಕೊಲೆ ಮಾಡಿದ್ದಾರೆ.ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶವ್ವ ಮತ್ತು ಸಂತೋಷ 2013ರಲ್ಲಿ ವಿವಾಹವಾಗಿದ್ದರು. ಕಾಶವ್ವ ಅವರು ನಿಪ್ಪಾಣಿಯಿಂದ ಸವದತ್ತಿ ಡಿಪೊಗೆ ವರ್ಗಾವಣೆ ಪಡೆದುಕೊಂಡಿದ್ದರು. ಸವದತ್ತಿಯ ರಾಮಾಪುರ ಬಡಾವಣೆ ಮನೆಯಲ್ಲಿ ವಾಸವಾಗಿದ್ದರು. ಪತಿ ಸಂತೋಷನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಸಂತೋಷ್ ಅವರನ್ನು ಪೊಲೀಸ್ ಸೇವೆಯಿಂದ ಅಮಾನತು ಮಾಡಲಾಗಿತ್ತು.ಆಕ್ಟೋಬರ್ 13 ರಂದು ಸಂತೋಷ್ ಕಾಶವ್ವ ಮನೆಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಬಳಿಕ ಮಾರಕಾಸ್ತ್ರದಿಂದ ಕಾಶವ್ವಗೆ ಇರಿದು ಕೊಲೆ ಮಾಡಿ ಬೀಗ ಹಾಕಿಕೊಂಡು ಸಂತೋಷ್ ಪರಾರಿಯಾಗಿದ್ದ. ನಾಲ್ಕೈದು ದಿನಗಳ ನಂತರ ದುರ್ನಾತ ಬೀರುತ್ತಿದ್ದ ಶವ ಪತ್ತೆಯಾಗಿದ್ದು, ಕೊಲೆ ಆರೋಪಿ ಸಂತೋಷ್ ನನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *