Breaking News

ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್!

ಸೇಡಿನ ಕಿಚ್ಚಿಗೆ ವಿಜಯಪುರ ಜಿಲ್ಲೆಯ ಶಾಂತವಾಗಿದ್ದ ಕನ್ನೂರು ಗ್ರಾಮದಲ್ಲಿ ಭೀಕರ ಡಬಲ್ ಮರ್ಡರ್ ನಡೆದಿದೆ. ದೊಡ್ಡಪ್ಪನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ ಇಬ್ಬರು ಸಹೋದರರು, ಹಂತಕರು ಎನ್ನಲಾದ ಕುಚುಕು ಗೆಳೆಯರನ್ನು ಕಲ್ಲುಗಳಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದಾರೆ.ಹತ್ಯೆಯ ನಂತರ, ಸೇಡಿನ ಸಂಕೇತವಾಗಿ ಮೃತದೇಹಗಳ ಪಕ್ಕದಲ್ಲೇ ಬಿಯರ್ ಬಾಟಲ್‌ಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಭೀಕರ ದ್ವಂದ್ವ ಕೊಲೆ ಪ್ರಕರಣ ವಿಜಯಪುರ ಜಿಲ್ಲೆಯಾದ್ಯಂತ ಭೀತಿ ಹುಟ್ಟಿಸಿದೆ. ಕೃತ್ಯ ಎಸಗಿ ಪರಾರಿಯಾಗಲು ಯತ್ನಿಸಿದ ಇಬ್ಬರು ಹಂತಕರ ಪೈಕಿ ಒಬ್ಬನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *