ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನೈತಿಕ ಪೊಲೀಸ್ಗಿರಿ ಮಿತಿ ಮೀರಿ ಹೋಗಿದೆ. ಊಟದ ಬಿಲ್ ಕೇಳಿದ ಕಾರಣಕ್ಕೆ ಪಟ್ಟಣದ ರತ್ನಾ ಹೋಟೆಲ್ ಮಾಲೀಕ ಹಾಗೂ ಅವರ ಮಗನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.ಈ ದಾಳಿಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ತವರೂರಾದ ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

