ಬಿಹಾರದ ಕುಖ್ಯಾತ ರೌಡಿ ರಂಜನ್ ಪಾಠಕ್ ಸೇರಿದಂತೆ ನಾಲ್ವರನ್ನು ದಿಲ್ಲಿಯ ದಕ್ಷಿಣ ಭಾಗವಾದ ರೋಹಿಣಿ ಪ್ರದೇಶದಲ್ಲಿ ಇಂದು ನಡೆದ ಎನ್ ಕೌಂಟರ್ ಹತ್ಯೆಗೈಯ್ಯಲಾಗಿದೆ.ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಹಾಗೂ ಅಭ್ಯರ್ಥಿಗಳಿಗೆ ಬೆದರಿಕೆ ಒಡ್ಡಲು ರಂಜನ್ ಪಾಠಕ್ ಮತ್ತವನ ತಂಡ ಸಕ್ರಿಯವಾಗಿತ್ತು ಎನ್ನಲಾಗಿದೆ. ಈ ತಂಡದ ಬಂಧನಕ್ಕೆ ಬಿಹಾರ ಪೊಲೀಸರು ಕಳೆದ ಹಲವು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.ಖಚಿತ ಸುಳಿವನ್ನಾಧರಿಸಿ, ಇಂದು ಬೆಳಗಿನ ಜಾವ 2.30ರ ವೇಳೆಗೆ ರೋಹಿಣಿ ರಸ್ತೆಯಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದಾಗ, ಅವರತ್ತ ರಾಜನ್ ಪಾಠಕ್ ಹಾಗೂ ಆತನ ಸಹಚರರು ಪೊಲೀಸರತ್ತ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪ್ರತಿ ದಾಳಿ ನಡೆಸಿದ ಪೊಲೀಸರು, ಅವರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ.ಈ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರೂ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಂಜನ್ ಪಾಠಕ್ ಹಾಗೂ ಆತನ ಸಹಚರರ ವಿರುದ್ಧ ಬಿಹಾರದಲ್ಲಿ ಅನೇಕ ಕೊಲೆ, ಬೆದರಿಕೆ, ದರೋಡೆ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಣ ಪ್ರಕರಣಗಳು ದಾಖಲಾಗಿದ್ದವು.
bigtvnews | Hubli Dharwad News | Kannada News | Karnataka News Hubli News | News In Hubli | Local news

