ರಾಜಸ್ಥಾನದ ಭಿಲ್ವಾರದಲ್ಲಿರುವ ಪೆಟ್ರೋಲ್ ಪಂಪ್ನಲ್ಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಒಬ್ಬ ಉದ್ಯೋಗಿಗೆ ಕಪಾಳಮೋಕ್ಷ ಮಾಡಿದ ನಂತರ ಉಂಟಾದ ವಾಗ್ವಾದವು ಹೊಡೆದಾಟಕ್ಕೆ ಕಾರಣವಾಯಿತು.ಇದರಿಂದಾಗಿ ಅಲ್ಲಿದ್ದ ಸಿಬ್ಬಂದಿ ಆ ಅಧಿಕಾರಿಗೆ ಕಪಾಳಮೋಕ್ಷ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದಾರೆ. ಪೋಲಿಸರು ಮಧ್ಯಪ್ರವೇಶಿಸಿ ಮೂವರು ಪೆಟ್ರೋಲ್ ಪಂಪ್ ನೌಕರರನ್ನು ಬಂಧಿಸಿದ್ದಾರೆ. ಪ್ರಸ್ತುತ ಪ್ರತಾಪ್ಗಢದ ಎಸ್ಡಿಎಂ ಛೋಟು ಲಾಲ್ ಶರ್ಮಾ ತಮ್ಮ ಪತ್ನಿ ದೀಪಿಕಾ ವ್ಯಾಸ್ ಅವರೊಂದಿಗೆ ಪೆಟ್ರೋಲ್ ಪಂಪ್ಗೆ ಭೇಟಿ ನೀಡಿದಾಗ ವಾಗ್ವಾದ ಪ್ರಾರಂಭವಾಯಿತು. ಪೆಟ್ರೋಲ್ ಪಂಪ್ ಕಾರ್ಮಿಕರಲ್ಲಿ ಒಬ್ಬರು ತನ್ನತ್ತ ಕಣ್ಣು ಮಿಟುಕಿಸಿ ಅಶ್ಲೀಲ ಕಾಮೆಂಟ್ ಮಾಡಿದ್ದಾರೆ ಎಂದು ದೀಪಿಕಾ ವ್ಯಾಸ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಇದಾದ ನಂತರ ಆ ಪೆಟ್ರೋಲ್ ಪಂಪ್ ಸಿಬ್ಬಂದಿಗೆ ಅಧಿಕಾರಿ ಕಪಾಳಮೋಕ್ಷ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

