ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದ ಹೋಂ ಸ್ಟೇನಲ್ಲಿ ನಡೆದಿದೆ.ಬೇಲೂರು ತಾಲೂಕು ದೇವಲಾಪುರದ 27 ವರ್ಷದ ರಂಜಿತಾ ಮೃತಪಟ್ಟ ಯುವತಿ. ಅವರ ಕುಟುಂಬದವರು ಮೂಡಿಗೆರೆಯಲ್ಲಿ ವಾಸವಾಗಿದ್ದಾರೆ.ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ, ಇಲ್ಲವೇ ಹೃದಯಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

