Breaking News

ಮೈಸೂರಲ್ಲಿ ಘೋರ ದುರಂತ : ಬಾಲಕನನ್ನು ರಕ್ಷಿಸಲು ಹೋದ ಇಬ್ಬರು ಸಹೋದರರು ನೀರುಪಾಲು

ಮೈಸೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಬಾಲಕನನ್ನು ರಕ್ಷಿಸಲು ಹೋದ ಸಹೋದರರಿಬ್ಬರು ನಿರುಪಾಲಾಗಿರುವ ಘಟನೆ ವರದಿಯಾಗಿದೆ. ಮೈಸೂರಿನ ಬಡಗಲಹುಂಡಿಯಲ್ಲಿ ಈ ಒಂದು ದುರಂತ ಸಂಭವಿಸಿದ್ದು, ವರುಣ ನಾಲೆ ನೀರಿನಲ್ಲಿ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.ಮೃತರನ್ನು ನಂದನ್ (25) ಮತ್ತು ರಾಕೇಶ್ (20) ಎಂದು ತಿಳಿದುಬಂದಿದೆ. ವರುಣ ನಾಲೆಯಲ್ಲಿ ಬಾಲಕನನ್ನು ಕಾಪಾಡಕ್ಕೆ ಹೋಗಿದ್ದಾರೆ ಆದರೆ ಇಬ್ಬರು ಕೂಡ ಸಾವನಪ್ಪಿದ್ದಾರೆ. ಮರದ ಕೊಂಬನ್ನು ಹಿಡಿದು ಜೀವ ಉಳಿಸಿ ಎಂದು ಬಾಲಕ ಹೊರಡುತ್ತಿದ್ದ. ಬಾಲಕನ ರಕ್ಷಣೆಗೆ ಇಬ್ಬರು ಸಹೋದರರು ನಾಲೆಗೆ ಇಳಿಯುತ್ತಾರೆ. ಆದರೆ ಇಬ್ಬರು ಮೃತಪಟ್ಟಿದ್ದಾರೆ. 15 ದಿನಗಳ ಹಿಂದೆ ಅಷ್ಟೇ ನಂದನ್ ಪ್ರೀತಿಸಿದ ಯುವತಿಯ ಜೊತೆಗೆ ಮದುವೆಯಾಗಿದ್ದ. ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *