ಹುಬ್ಬಳ್ಳಿ — ಹಳೆ ಹುಬ್ಬಳ್ಳಿಯ ಬೀರಬಂದ್ ಓಣಿಯ ಮುಖ್ಯ ಸರ್ಕಲ್ನಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ “ವೋಟ್ ಚೋರ್ ಗದ್ದಿ ಛೋಡ್” ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.
ಅಭಿಯಾನ ವೇಳೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.
ಮಯೂರ ಜಯಕುಮಾರ್ ಹೇಳುವಂತೆ — “ಪ್ರಜಾಪ್ರಭುತ್ವ ಉಳಿವಿಗಾಗಿ ಈ ಹೋರಾಟ ನಡೆಸುತ್ತಿದ್ದೇವೆ, ಈಗಾಗಲೇ ಕರ್ನಾಟಕದಲ್ಲಿ ಒಂದು ಕೋಟಿ ಸಹಿ ಸಂಗ್ರಹಿಸಿದ್ದೇವೆ.”
ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ ಕೂಡ ಭಾಗವಹಿಸಿ — “ನನ್ನ ಕ್ಷೇತ್ರದಲ್ಲಿಯೂ ಮತಗಳ್ಳತನ ನಡೆದಿದೆ, ಇದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

