Breaking News

ಮಂಡ್ಯದಲ್ಲಿ ಘೋರ ದುರಂತ : ಟಿಪ್ಪರ್ ಡಿಕ್ಕಿಯಾಗಿ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ.!

ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಕಾರೊಂದು ಹೊತ್ತಿ ಉರಿದಿದ್ದು, ಚಾಲಕ ಸಜೀವವಾಗಿ ದಹನಗೊಂಡಿದ್ದಾನೆ.ಟಿಪ್ಪರ್ ಗೆ ಇನೋವಾ ಕಾರು ಡಿಕ್ಕಿಯಾಗಿ ಕಾರಿಗೆ ಬೆಂಕಿ ತಗುಲಿದೆ. ನಂತರ ಕಾರಿನಿಂದ ಹೊರಬರಲಾರದೇ ಚಂದ್ರಶೇಖರ್ ಎಂಬುವವರು ಸಜೀವವಾಗಿ ದಹನವಾಗಿದ್ದಾರೆ.ಮೃತರನ್ನು ಹುಣಸೂರು ಮೂಲದ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಬೆಂಕಿ ತಗುಲಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆದರೆ ಅಷ್ಟರಲ್ಲೇ ಚಂದ್ರಶೇಖರ್ ಸುಟ್ಟು ಕರಕಲಾಗಿದ್ದರು. ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *