Breaking News

20 ಅಡಿ ಎತ್ತರದಿಂದ ಬಿದ್ದ ಮದುವೆ ವ್ಯಾನ್‌; ಕುಕ್ಕೆ ಸುಬ್ರಮಣ್ಯಕ್ಕೆ ಹೊರಟಿದ್ದವರು ಆಸ್ಪತ್ರೆ ಪಾಲು

ಸಕಲೇಶಪುರ:- ವಣಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಮದುವೆಗೆ ಹೊರಟಿದ್ದ 30 ಜನರಿದ್ದ ವ್ಯಾನ್ ಬಿಸ್ಲೆ ಘಾಟ್ ಡಬಲ್ ಟರ್ನ್ ನಲ್ಲಿ 20 ಅಡಿ ಎತ್ತರದಿಂದ ಮಗುಚಿ ಬಿದಿದ್ದು 4 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ತಾಲ್ಲೂಕಿನ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.ವಣಗೂರು ಕುಣಿಕೆರೆ ಬಸವೇಗೌಡರ ಮಗ ಯೋಗೇಶ್ ಅವರ ಮದುವೆ ಇಂದು ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲಗುಂದ ಹುಡುಗಿಯೊಂದಿಗೆ ನಿಶ್ಚಯವಾಗಿತ್ತು. ಇಂದು ಬೆಳಗ್ಗೆ ಮದುವೆ ಇದ್ದ ಕಾರಣ ಗಂಡಿನ ಕಡೆಯವರು ಮಿನಿ ಬಸ್ (KA12B 2579)ನಲ್ಲಿ 30 ಜನರು ಹೊರಟಿದ್ದರು. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಬಿಸ್ಲೆ ಘಾಟ್ ಡಬಲ್ ಟರ್ನಲ್ಲಿ ರಸ್ತೆಯ ಪಕ್ಕದಲ್ಲಿ ತೆಗೆದ ಚರಂಡಿ ಹಾಗೂ ಚಾಲಕನ ನಿಯಂತ್ರಣ ತಪ್ಪಿದ ಬಸ್ 30 ಅಡಿ ಆಳಕ್ಕೆ ಮಗುಚಿ ಬಿದ್ದಿದೆ. ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ, ಉಳಿದವರು ಸಣ್ಣಪುಟ್ಟ ಗಾಯಗಳಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು, ನಲ್ಯಾಣಿ ಹಾಗೂ ಸಕಲೇಶಪುರಕ್ಕೆ ಆಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಅದೃಷ್ಟವಶಾತ್ ಪ್ರಾಣಪಯದಿಂದ ಪಾರಾಗಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *