Breaking News

ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ 17 ಮಕ್ಕಳ ರಕ್ಷಣೆ-ಅಪಹರಣಕಾರ ಗುಂಡೇಟಿಗೆ ಸಾವು!

ವ್ಯಕ್ತಿಯೊಬ್ಬ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಕನಿಷ್ಠ 17 ಮಕ್ಕಳನ್ನು ಮುಂಬೈಯ ಪೂವೈ ಪ್ರದೇಶದಲ್ಲಿ ಗುರುವಾರ (ಅ.30) ರಕ್ಷಿಸಲಾಗಿದ್ದು, ಅಪಹರಣಕಾರನನ್ನು ರೋಹಿತ್‌ ಆರ್ಯ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಸಂದರ್ಭ ಆರ್ಯ ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಆರೋಪಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.ಅಪಹರಣಕಾರ ರೋಹಿತ್‌ ಜತೆ ಪೊಲೀಸರು ಮಾತುಕತೆ ನಡೆಸಿ, ಯಾಕೆ ಇಂತಹ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದನ್ನು ಪತ್ತೆಹಚ್ಚಲು ಪ್ರಯತ್ನಿಸಿರುವುದಾಗಿ ಮುಂಬೈ ಪೊಲೀಸರು ಈ ಮೊದಲು ಮಾಹಿತಿ ನೀಡಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *