ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ವಿಜಯಪುರ ತಾಲೂಕಿನ ಕನ್ನೊಳ್ಳಿ ಗ್ರಾಮದ ಸಮೀಪ ಇರುವ ವಿಜಯಪುರ -ಕಲಬುರಗಿ ಟೋಲ್ ನಲ್ಲಿ ಘಟನೆ ನಡೆದಿದೆ.ಬಳಿಕ ಟೋಲ್ ಸಿಬ್ಬಂದಿ ಮಧ್ಯಪ್ರವೇಶಿಸಿ ಗಲಾಟೆ ಬಿಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ನನ್ನ ಮಗ ಮಾಡಿದ್ದು ತಪ್ಪು, ಸಿಬ್ಬಂದಿ ಕೂಡ ಆ ರೀತಿ ಮಾತನಾಡಿದ್ದು ತಪ್ಪು. ಅವರು ಕೇಸು ದಾಖಲಿಸಿದ್ರೆ ನಾವು ಕೇಸು ದಾಖಲಿಸುತ್ತೇವೆ. ನನ್ನ ಮಗನ ಪರವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಇದರಲ್ಲಿ ರಾಜಕೀಯ ಪ್ರವೇಶವಾಗಿ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

