ಬಿಸಿಲೆ ಘಾಟ್ನಲ್ಲಿ ಇತ್ತೀಚೆಗೆ ನಡೆದ ಬಸ್ ಅಪಘಾತದಲ್ಲಿ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ಈ ಗಾಯಾಳುಗಳಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆಯನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ತುರ್ತಾಗಿ ಸಾಗಿಸುವ ಕಾರ್ಯವನ್ನು ಆಂಬುಲೆನ್ಸ್ ಸಿಬ್ಬಂದಿ ಕೈಗೊಂಡಿದ್ದರು.ಸ್ಕೂಟಿ ಸವಾರನ ಈ ಬೇಜವಾಬ್ದಾರಿಯುತ ವರ್ತನೆಯನ್ನು ಆಂಬುಲೆನ್ಸ್ನ ಸಹ-ಚಾಲಕ ಕಾರ್ತಿಕ್ ಅವರು ತಮ್ಮ ಮೊಬೈಲ್ನಲ್ಲಿ ಸಂಪೂರ್ಣವಾಗಿ ದಾಖಲಿಸಿಕೊಂಡಿದ್ದಾರೆ. ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ತುರ್ತು ಸೇವೆಗೆ ಅಡ್ಡಿಪಡಿಸಿದ ಕಾರಣ ಸ್ಕೂಟಿ ಸವಾರನ ವಿರುದ್ಧ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

