Breaking News

ನೇಣು ಹಾಕಿಕೊಂಡು ಬಾಲಕ ಆತ್ಮಹತ್ಯೆ

ಬಾಲಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಪುನರ್ವಸತಿ ಕೇಂದ್ರದಲ್ಲಿ ಘಟನೆ ನಡೆದಿದೆ. ಆಕಾಶ್ ಹೆದ್ದಾರಿ (15) ಮೃತಪಟ್ಟ ದುರ್ದೈವಿ.ಮೃತ ಆಕಾಶ್ ಜಮಖಂಡಿಯ ಡಿಸ್ಟಿಕ್ ಬಂಜಾರ ಎಜುಕೇಶನ್ ಸೋಸೈಟಿ ಹೈಸ್ಕೂಲ್‌ನಲ್ಲಿ ಒಂಬತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.ಇಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಘಟನೆಯ ಮಾಹಿತಿ ದೊರಕಿದ ಕೂಡಲೇ ಜಮಖಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನೈಜ ಕಾರಣ ತಿಳಿಯಲು ಜಮಖಂಡಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *