ಅಪೂರ್ವ ಭಟ್ ಚೇತರಿಕೆಗೆ ಇಡೀ ರಾಜ್ಯ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಾಯಗೊಂಡ ಅಪೂರ್ವ ಭಟ್ ಬರುವಿಕೆಗಾಗಿ ಮೂರು ವರ್ಷದ ಮಗಳು, ಪತಿ ಆಶಿಶ್ ಸಾರಡ್ಕ್ ಹಗಳಿರುಳು ಪ್ರಾರ್ಥಿಸಿದ್ದರು. ಆದರೆ ಬರೋಬ್ಬರ 130 ದಿನ ಕೋಮಾದಲ್ಲಿದ್ದ ಅಪೂರ್ವ ಭಟ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಇದರ ಬೆನ್ನಲ್ಲೇ ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಅಪೂರ್ವ ಭಟ್ ತಂದೆ ಈಶ್ವರ್ ಭಟ್ ನಿಧನರಾಗಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈಶ್ವರ್ ಭಟ್ಗೆ ಚಿಕಿತ್ಸೆ ನೀಡಲಾಗುತ್ತಿತ್ತು.ಈಶ್ವರ ಭಟ್ (70) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ನ.03) ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

