ಬೆಂಗಳೂರಿನಲ್ಲಿ ಚರ್ಮರೋಗ ತಜ್ಞೆ ಕೃತಿಕಾಳನ್ನು ಆಕೆಯ ಪತಿ ಮಹೇಂದ್ರನೇ ಅನಸ್ಥೇಶಿಯಾ ನೀಡಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ.ಆರೋಪಿ ಮಹೇಂದ್ರ ರೆಡ್ಡಿ ಹಲವು ಮಹಿಳೆಯರ ಮೇಲೆ ಕಣ್ಣು ಹಾಕಿದ್ದು, ಪತ್ನಿ ಕೃತಿಕಾಳನ್ನು ಕೊಲೆ ಮಾಡಿದ ನಂತರ ಆರೋಪಿ ‘ನಿನಗಾಗಿ ನಾನು ನನ್ನ ಹೆಂಡತಿಯನ್ನು ಕೊಂದೆ’ ಎಂದು ಹಲವು ಮಹಿಳೆಯರಿಗೆ ಸಂದೇಶ ಕಳುಹಿಸಿದ್ದ ಎಂಬ ಸ್ಫೋಟಕ ಸತ್ಯ ಬಯಲಾಗಿದೆ. ಆಕೆಯ ಮೊಬೈಲ್ನ್ನು ವಶಕ್ಕೆ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿದ ತನಿಖಾಧಿಕಾರಿಗಳಿಂದ ಈ ವಿಚಾರ ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

