ಎಸ್ಬಿಐ ಬ್ಯಾಂಕ್ ಹೆಸರಲ್ಲಿ ವಾಟ್ಸ್ಆಯಪ್ ಗ್ರೂಪ್ವೊಂದನ್ನು ಸೃಷ್ಟಿಸಿ, ಅದಕ್ಕೆ ಶಬೀರ್ ಅವರ ಮೊಬೈಲ್ ಸಂಖ್ಯೆಯನ್ನು ಆರೋಪಿಗಳು ಸೇರಿಸಿದ್ದರು.ಸ್ವಲ್ಪ ಸಮಯದ ಬಳಿಕ ಎಪಿಕೆ ಫೈಲ್ ಅನ್ನು ಕಳುಹಿಸಿ, ‘ಈ ದಿನ ನಿಮ್ಮ ಖಾತೆಯನ್ನು ಅಪ್ಡೇಟ್ (ಕೆವೈಸಿ) ಮಾಡಿಕೊಳ್ಳಿ. ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ’ ಎಂದು ಸಂದೇಶ ಕಳುಹಿಸಿದ್ದರು. ಹೀಗಾಗಿ ಅವರು ಎಪಿಕ್ ಫೈಲ್ ತೆರೆದು ಕೆವೈಸಿಗೆ ಸಂಬಂಧಿಸಿದ ಮಾಹಿತಿಗಳು, ಆಧಾರ್ ಕಾರ್ಡ್, ಎಟಿಎಂ ನಂಬರ್ ಹಾಗೂ ಪಾನ್ ನಂಬರ್ ಅಪ್ಡೇಟ್ ಮಾಡಿದ್ದರು. ಇದಾದ ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ₹5 ಲಕ್ಷ ಕಡಿತವಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

