ಉಗಾರ ಬಿಕೆ ಗ್ರಾಮದಲ್ಲಿ ಬುಧವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಆರು ಮಂದಿ ರೈತರಿಗೆ ಸೇರಿದ 20 ಎಕರೆಯಷ್ಟು ಕಬ್ಬು ಸುಟ್ಟಿದ್ದು, ₹25 ಲಕ್ಷದಷ್ಟು ನಷ್ಟವಾಗಿದೆ ಎಂದು ರೈತರು ಅಂದಾಜಿಸಿದ್ದಾರೆ.ಭರತೇಶ ಖಂಡೇರಾಜುರೆ ಅವರ 5 ಎಕರೆ, ಚಂದ್ರಕಾಂತ ಅಕಿವಾಟೆ, ಧರೆಪ್ಪ ಕುಸನಾಳೆ ಅವರ ತಲಾ 3 ಎಕರೆ, ಮಲ್ಲು ಕುರುಬರ, ಅಣ್ಣು ಕುರಬರ, ಮಹಾದೇವ ಕುರುಬರ ಅವರಿಗೆ ಸೇರಿದ 9 ಎಕರೆ ಬೆಂಕಿಗೆ ಆಹುತಿಯಾಗಿದೆ.ಕಾಗವಾಡದಿಂದ ಅಗ್ನಿ ಶಾಮಕ ದಳದ ವಾಹನ ಬರುವಷ್ಟರಲ್ಲಿ ಕಬ್ಬು ಸುಟ್ಟು ಹೋಯಿತು ಎಂದು ರೈತರು ದೂರಿನಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

