Breaking News

ಚಿಕ್ಕಮಗಳೂರಲ್ಲಿ ಖಾಸಗಿ ಬಸ್ ಪಲ್ಟಿ : ಪ್ರವಾಸಕ್ಕೆ ಬಂದಿದ್ದ 11 ವಿದ್ಯಾರ್ಥಿಗಳಿಗೆ ಗಾಯ, ಐವರ ಸ್ಥಿತಿ ಚಿಂತಾಜನಕ

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಶೃಂಗೇರಿ ತಾಲೂಕಿನ ಕಾವಡಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಅಪಘಾತದಲ್ಲಿ 11 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಐವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೃಂಗೇರಿ ಪ್ರವಾಸಕ್ಕೆ ವಿದ್ಯಾರ್ಥಿಗಳ ತಂಡ ಬಂದಿತ್ತು. ಚಿತ್ರದುರ್ಗದ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಾಗ ಈ ಅಪಘಾತ ಸಂಭವಿಸಿದೆ.ಬಸ್ ನಲ್ಲಿ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎಂದು ತಿಳಿದು ಬಂದಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *