Breaking News

ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಬೈಕ್ ರೈಡ್‌ಗೆ ತೆರಳಿದ್ದ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ.

ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಬೈಕ್‌ನಲ್ಲಿ ರೈಡ್‌ಗೆಂದು ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬೆಂಗಳೂರು ನಗರದ ನಿವಾಸಿಗಳಾದ ಕೇಶವ ಪ್ರಸಾದ್ (21) ಮತ್ತು ಮಯೂರ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ. ಸ್ನೇಹಿತರಾದ ಇವರಿಬ್ಬರು, ಭಾನುವಾರದ ರಜಾ ದಿನದಂದು ತಮ್ಮ ಬೈಕ್‌ನಲ್ಲಿ ಬೆಂಗಳೂರಿನಿಂದ ಹಾಸನದ ಕಡೆಗೆ ರೈಡ್‌ ಹೊರಟಿದ್ದರು ಎನ್ನಲಾಗಿದೆ. ಮುಂಜಾನೆಯ ಸಮಯದಲ್ಲಿ, ಅತೀ ವೇಗವಾಗಿ ಚಲಿಸುತ್ತಿದ್ದ ಬೈಕ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಾಜಕಕ್ಕೆ (ಡಿವೈಡರ್‌) ರಭಸವಾಗಿ ಅಪ್ಪಳಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *