ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ಇಲ್ಲಿನ ಅಮೋಘಸಿದ್ದ ದೇವಸ್ಥಾನದ ಅರ್ಚಕ ಅಮಸಿದ್ದ ಬಿರಾದಾರ್ (35) ಹತ್ಯೆಯಾದ ಅರ್ಚಕರು. ಹಲವು ವರ್ಷಗಳಿಂದ ಅಮಸಿದ್ದ, ಅಮೋಘಸಿದ್ದ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದರು.ಇದೀಗ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

