ಬೆಂಗಳೂರಿನಿಂದ ಕುಂದಾಪುರಕ್ಕೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಹಂಗಳೂರು ಸಂಜಯ ಗಾಧಿ ರಸ್ತೆ ನಿವಾಸಿ ಎನ್. ಕೃಷ್ಣಮೂರ್ತಿ ಶೇಟ್ ಅವರ 15 ಲಕ್ಷ ರೂ.ಗಳ ಬೆಳ್ಳಿ ಗಟ್ಟಿ ಹಾಗೂ 3 ಲಕ್ಷ ರೂ. ನಗದು ಕಳವಾಗಿದೆ.ಬೆಳಗ್ಗೆ ಲಗೇಜ್ ಬ್ಯಾಗನ್ನು ನೋಡಿದಾಗ ಜಿಪ್ ತೆರೆದಿದ್ದು 10 ಕೆಜಿ ಬೆಳ್ಳಿಯ ಗಟ್ಟಿ ಹಾಗೂ 3 ಲಕ್ಷ ನಗದು ಹಣ ಕಳವಾಗಿತ್ತು. 10 ಕೆಜಿ ಬೆಳ್ಳಿಯ ಗಟ್ಟಿ ಅಂದಾಜು ಮೌಲ್ಯ 15,39,655 ರೂ. ಹಾಗೂ 3 ಲಕ್ಷ ರೂ. ನಗದು ಒಟ್ಟು ಸೇರಿ 18,39,655 ರೂ.ಗಳನ್ನು ಕಳವು ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

