Breaking News

ಕಾರ್ ರಿವರ್ಸ್ ತೆಗೆಯುವಾಗ ಮಗುವಿನ ಮೇಲೆ ಹರಿದು ಸಾವು!

ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ದುರಂತ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ನಡೆದಿದೆ.ಮೋಹನ್ ದಂಪತಿಯ ಒಂದೂವರೆ ವರ್ಷದ ನೂತನ್ ಕಾರು ಚಕ್ರದಡಿಗೆ ಸಿಲುಕಿ ಮೃತಪಟ್ಟ ಮಗುವಾಗಿದೆ.ಮೋಹನ್ ಅಕ್ಕ ದೇವಿಕಾ ಹಾಗೂ ಭಾವ ಮುನೇಶ್ ಶನಿವಾರ ಬೆಳಗ್ಗೆ ಮೋಹನ್ ಅವರ ಮನೆಗೆ ಬಂದಿದ್ದರು. ಮನೆಯಿಂದ ಹೊರಟು ಕಾರನ್ನು ರಿವರ್ಸ್ ತೆಗೆಯುವ ವೇಳೆ ದುರ್ಘಟನೆ ಸಂಭವಿಸಿದೆ. ಮಗವನ್ನು ಗಮನಿಸದೇ ಕಾರು ಚಲಾಯಿಸಿದ ಪರಿಣಾಮ ಮಗು ಸ್ಥಳದಲ್ಲೆ ಮೃತಪಟ್ಟಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *