Breaking News

ಅಪ್ಪನ ಮೇಲೆ ಹಲ್ಲೆ: ವ್ಯಕ್ತಿ ಕೊಂದ ಪುತ್ರ

ಬೆಂಗಳೂರು: ಅಪ್ಪನ ಮೇಲೆ ಹಲ್ಲೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಪುತ್ರ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಗರದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ‌ನಾರಾಯಣಸ್ವಾಮಿ(55) ಕೊಲೆಯಾದವರು.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಜಯ್​ ಎಂಬಾತನನ್ನು ಬಂಧಿಸಿದ್ದಾರೆ.ಅಜಯ್ ತಂದೆ ಮುನಿವೆಂಕಟಪ್ಪ ಮತ್ತು ನಾರಾಯಣಸ್ವಾಮಿ ಅವರು ಮದ್ಯದ ಅಮಲಿನಲ್ಲಿ ನ.11ರಂದು ಗಲಾಟೆ ಮಾಡಿಕೊಂಡಿದ್ದರು. ತಂದೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕೋಪಗೊಂಡಿದ್ದ ಅಜಯ್, ನಾರಾಯಣಸ್ವಾಮಿ ಅವರ ಮೇಲೆ ತೀವ್ರ ಹಲ್ಲೆ ಮಾಡಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾರಾಯಣಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭಾನುವಾರ ಮೃತಪಟ್ಟಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *