ಬಂಧಿತನನ್ನು ಝೇವಿಯರ್ ಎಂದು ಗುರುತಿಸಲಾಗಿದೆ.ಈತ ಕಾನ್ಸ್ಟೇಬಲ್ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆ ಸ್ಕೆಚ್ ಹಾಕಿದ್ದರು. ರಾಬರಿ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್ ನನ್ನು ಕೂಡ ಬಂಧಿಸಲಾಗಿದೆ. ಅಣ್ಣಪ್ಪ ನಾಯ್ಕ್ ರಾಬರಿ ಮಾಡಲು ಹುಡುಗರ ಗ್ಯಾಗ್ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು.? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ಟ್ರೈನಿಂಗ್ ಕೂಡ ಕೊಟ್ಟಿದ್ದನು. ಈತನ ಪ್ಲ್ಯಾನ್ ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಸಿಎಂಎಸ್ ಸೆಕ್ಯೂರಿಟಿ ಏಜೆನ್ಸಿಯ ಮಾಜಿ ಉದ್ಯೋಗಿಗಳು ಕೂಡ ದರೋಡೆಗೆ ಸಾಥ್ ನೀಡಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

