Breaking News

ಹುಬ್ಬಳ್ಳಿ- ಸ್ನೇಹಿತರಿಂದಲೇ ಸ್ನೇಹಿತನ ಕೊಲೆಗೆ ಯತ್ನ! ಮಧ್ಯ ಕುಡಿಸಿ ಕರೆದೊಯ್ದು ಚಾಕು ಇರಿತ!

ಹುಬ್ಬಳ್ಳಿಯ ಗಿರಿಯಾಲ ರಸ್ತೆಯಲ್ಲಿ ನಡೆದ ಘಟನೆ.
ಮಹೇಶ್ ಎಂಬಾತನಿಗೆ ಹೊಟ್ಟೆ ಸೇರಿ ದೇಹದ ವಿವಿಧ ಭಾಗಗಳಿಗೆ ನಿರ್ದಯವಾಗಿ ಚಾಕು ಇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹೇಶ್ ನನ್ನು ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಿರಿಯಾಲ ರಸ್ತೆಯ ಬಾರೊಂದರಲ್ಲಿ ಮದ್ಯ ಸೇವಿಸಿದ್ದ ಮೂವರು ಸ್ನೇಹಿತರ ನಡುವೆ ಕ್ಷುಲಕ ಕಾರಣಕ್ಕಾಗಿ ಜಗಳ ಶುರುವಾಗಿದ್ದು, ಜಗಳ ನಡೆದು ಸ್ವಲ್ಪ ದೂರ ಬಂದ ನಂತರ ರಮೇಶ್ ಹಾಗೂ ಆತನ ಸ್ನೇಹಿತರು ಸೇರಿ ಮಹೇಶ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪ. ಚಾಕುವಿನಿಂದ ಇರಿದು ಎಸ್ಕೇಪ್ ಆದ ಇಬ್ಬರು ಸ್ನೇಹಿತರು —
ನೇಕಾರ ನಗರದ ರಮೇಶ್ ಹಾಗೂ ಆತನ ಸ್ನೇಹಿತನ ವಿರುದ್ಧ ಕೃತ್ಯದ ಶಂಕೆ ವ್ಯಕ್ತವಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಮಹೇಶ್ ಗೆ ಕಿಮ್ಸ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ.
ಈ ಘಟನೆಯ ಹಿಂದೆ ಹಣಕಾಸಿನ ವ್ಯವಹಾರವೇ ಕಾರಣ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಈ ಸಂಪೂರ್ಣ ಘಟನೆ ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *