Breaking News

ಕುಂದುವಾಡ ಕೆರೆಯಲ್ಲಿ ಯುವಕರ ಶವಗಳು ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ದಾವಣಗೆರೆ ನಗರದ ಕುಂದುವಾಡ ಕೆರೆಯಲ್ಲಿ ಇಬ್ಬರು ಯುವಕರ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ.ಮೃತರು ಶಾಂತಿನಗರದ ಚೇತನ್ (22) ಮತ್ತು ಮನು (23)ರಾಗಿದ್ದಾರೆ. ಇಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇಂದು ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಇಬ್ಬರ ಶವಗಳು ಕೆರೆಯಲ್ಲಿ ಕಂಡುಬಂದಿವೆ. ಪ್ರಾಥಮಿಕ ಶಂಕೆ ಪ್ರಕಾರ, ಯುವಕರು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಘಟನೆ ಸಂಭವಿಸಿರಬಹುದು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ತನಿಖೆ ಪ್ರಾರಂಭವಾಗಿದ್ದು, ಶವಗಳ ಸ್ವಭಾವ ಮತ್ತು ಸುತ್ತಲಿನ ಪರಿಸ್ಥಿತಿಗಳನ್ನು ದಾಖಲಿಸಲಾಗುತ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *