Breaking News

ಚಿನ್ನದ ವ್ಯಾಪಾರಿಯಿಂದ ಚಿನ್ನಾಭರಣ ದರೋಡೆ ಕೇಸ್ : ಇಬ್ಬರು ‘PSI’ ಸೇರಿ ನಾಲ್ವರು ಅರೆಸ್ಟ್.!

ದಾವಣಗೆರೆಯ ಕೆಟಿಜೆ ನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನ ಪಿಎಸ್‌ಐ ಮಾಳಪ್ಪ ಚಿಪ್ಪಲಕಟ್ಟೆ, ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ.ಚಿನ್ನದಂಗಡಿಯ ಸಹ ಕೆಲಸಗಾರರ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬುವವರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಮೂಲದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಸೇರಿ ವ್ಯಾಪಾರಿಗೆ ಹೆದರಿಸಿದ್ದಾರೆ. ನಾವು ಐಜಿ ಸ್ಕ್ವಾಡ್ ಎಂದು ಹೇಳಿ. ಪೊಲೀಸ್ ಐಡಿ ಕಾರ್ಡ್, ನಕಲಿ ಗನ್ ತೋರಿಸಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಪೊಲೀಸ್ ಠಾಣೆಯ ಒಳಗಡೆ ಹೋಗದೇ ವಾಪಸ್ ಕರೆತಂದಿದ್ದರು. ನಂತರ ವ್ಯಾಪಾರಿಯ ಬಳಿ ಇದ್ದ ಬಂಗಾರವನ್ನು ಕಸಿದುಕೊಂಡು ಎಸ್ಕೇಪ್ ಆಗಿದ್ದರು.

Share News

About BigTv News

Check Also

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು …

Leave a Reply

Your email address will not be published. Required fields are marked *