Breaking News

ಗದರಿಕೆಗೆ ಬೆಲೆ ತೆತ್ತ ಕುಟುಂಬ: ‘ಕೆಲಸ’ದ ಕಾರಣಕ್ಕೆ ಬದುಕು ಕಳೆದುಕೊಂಡ ಬಾಲಕ

ಮೃತ ಬಾಲಕನನ್ನು ದಾವಣಗೆರೆಯ ಚಿಕ್ಕನಹಳ್ಳಿಯ ನಿವಾಸಿ ತರುಣ್ (16) ಎಂದು ಗುರುತಿಸಲಾಗಿದೆ.ತರುಣ್ ಇತ್ತೀಚೆಗೆ ಯಾವುದೇ ಕೆಲಸವಿಲ್ಲದೆ ಮನೆಯಲ್ಲಿರುತ್ತಿದ್ದನು. ಈ ಕಾರಣಕ್ಕಾಗಿ ಪೋಷಕರು, “ಸುಮ್ಮನೆ ಗೆಳೆಯರ ಜೊತೆ ಸೇರಿ ಕೆಟ್ಟ ದಾರಿ ಹಿಡಿಯುವ ಬದಲು ಯಾವುದಾದರೂ ಕೆಲಸಕ್ಕೆ ಹೋಗು” ಎಂದು ಬುದ್ಧಿ ಹೇಳಿ ಗದರಿದ್ದರು ಎನ್ನಲಾಗಿದೆ. ಪೋಷಕರ ಈ ಮಾತುಗಳಿಂದ ತೀವ್ರವಾಗಿ ಮನನೊಂದ ತರುಣ್, ತಕ್ಷಣವೇ ಮನೆಯಿಂದ ಹೊರಟು ಹೋಗಿದ್ದ. ಆತನಿಗಾಗಿ ರಾತ್ರಿಯಿಡೀ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಆದರೆ, ಬೆಳಗ್ಗೆ ರೈಲು ಹಳಿ ಮೇಲೆ ತರುಣ್ ಅವರ ದೇಹ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *