ಶೇಷಾದ್ರಿಪುರಂನಲ್ಲಿ ಚಾಕುವಿನಿಂದ ಇರಿದು ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಶೇಷಾದ್ರಿಪುರಂನ 1ನೇ ಮುಖ್ಯರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಮೃತರನ್ನು ಬಿಜಾಪುರ ಮೂಲದ ಶರಣಮ್ಮ (23) ಎಂದು ಗುರುತಿಸಲಾಗಿದೆ.ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರನನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಕಾರ್ಯಾಚರಣೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

