Breaking News

ಮದುವೆಯಾಗಿ 16 ವರ್ಷ ಆಯ್ತು,ಪರಿಸ್ಥಿತಿ ಏನೂ ಬದಲಾಗಿಲ್ಲ, ಪತಿಯ ಕ್ರೌರ್ಯ

ಮಧ್ಯಪ್ರದೇಶದ ಜಬಲ್ಪುರದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ತನ್ನ ಪತಿಯ ಕ್ರೌರ್ಯದ ಪುರಾವೆಗಳೊಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿದ್ದಾರೆ.ಪತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಲ್ಲದೆ, ತನ್ನನ್ನೂ ಮತ್ತು ತನ್ನ ಮಕ್ಕಳನ್ನು ಮನೆಯಿಂದ ಹೊರಗಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಹಲ್ಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಅಧಿಕಾರಿಗಳಿಗೆ ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಮದುವೆಯಾಗಿ 16 ವರ್ಷಗಳಾಗಿವೆ. ತನ್ನ ಗಂಡ ಪ್ರತಿದಿನ ತನಗೆ ವಿಚ್ಛೇದನ ನೀಡುವಂತೆ ಒತ್ತಡ ಹೇರುತ್ತಾ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಹಿಂಸಾಚಾರದ ಸಮಯದಲ್ಲಿ ಆಕೆಯ ಅತ್ತೆ ಮತ್ತು ಅತ್ತಿಗೆ ಮೂಕ ಪ್ರೇಕ್ಷರಾಗಿಯೇ ಉಳಿದಿದ್ದರು ಎಂದು ಹೇಳಿದ್ದಾಳೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *