ರಾಯಚೂರು: ತಾಲೂಕಿನ ಕಲ್ಮಲಾ ಸಮೀಪ ಗಾಜು ತುಂಬಿದ ಲಾರಿ ಪಲ್ಟಿಯಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಸೋಮವಾರ (ಡಿ.01) ಬೆಳಗ್ಗೆ ಬೈಕ್ ಸವಾರ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿದೆ. ಬೈಕ್ ಸವಾರರನ್ನು ತಪ್ಪಿಸಲು ಹೋಗಿ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆಇದರಿಂದ ರಸ್ತೆಯ ಮಧ್ಯೆ ಅಡ್ಡಲಾಗಿ ಲಾರಿ ಬಿದ್ದಿರುವುದು ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಬೈಕ್ ಸವಾರರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಸ್ಥಳಕ್ಕೆ ತೆರಳಿದ ರಾಯಚೂರು ಗ್ರಾಮೀಣ ಪೊಲೀಸರು ಕ್ರೇನ್ ಮೂಲಕ ಲಾರಿ ತೆರವುಗೊಳಿಸುತ್ತಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

