Breaking News

IAS ಅಧಿಕಾರಿ ಮಗಳ ಅನುಮಾನಾಸ್ಪದ ಸಾವು!

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಂಗಳಗಿರಿ-ತಾಡೇಪಲ್ಲಿ ಹಿರಿಯ ಐಎಎಸ್ ಅಧಿಕಾರಿ ಮತ್ತು ಎಸ್‌ಸಿ ಕಾರ್ಪೊರೇಷನ್ ಕಾರ್ಯದರ್ಶಿ ಚಿನ್ನರಾಮ್ ಅವರ ಪುತ್ರಿ ಮಾಧುರಿ ಸಾಹಿತಿ ಬಾಯಿ (27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಐಎಎಸ್ ಅಧಿಕಾರಿ ಕುಟುಂಬ ಮಗಳ ಸಾವನ್ನು ಆತ್ಮಹತ್ಯೆ ಎಂದು ಹೇಳಿದ್ದು, ಇದಕ್ಕೆ ಆಕೆಯ ಗಂಡನ ಮನೆಯವರ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದಾರೆ. ತಾವು ಮನೆಯಲ್ಲಿರದಿದ್ದಾಗ ಮಗಳಾದ ಮಾಧುರಿ ರೂಮಿನ ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾವು ರೂಮಿನ ಬಾಗಿಲು ಒಡೆದು ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿದ್ದಳು ಎಂದು ಹೇಳಿದ್ದಾರೆ.ಮಾಧುರಿ ತಾಯಿ ಲಕ್ಷ್ಮಿಬಾಯಿ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *