ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಯ ಮೇಲೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾನೆ. ಇದರಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಳಗ್ಗೆ 8.15ರ ಸುಮಾರಿಗೆ ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿ ರೈಲು ನಿಲ್ದಾಣದಲ್ಲಿ ವ್ಯಕ್ತಿ ಹಳಿಯ ಮೇಲೆ ಹಾರಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ.ಮೈಸೂರು ರಸ್ತೆ ಮತ್ತು ಚಾಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

