ಕೋಲಾರದ ರಹಮತ್ ನಗರ ರೈಲ್ವೆ ಬ್ರಿಡ್ಜ್ ಹಳಿಗಳ ಬಳಿ 26 ವರ್ಷದ ಯುವಕನು ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು ಸಂಚಲನ ಮೂಡಿಸಿದೆ.ಉತ್ತರಪ್ರದೇಶ ಮೂಲದ ರಾಜೇಂದ್ರ ಎಂಬ ಯುವಕ, ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನೆಂದು ತಿಳಿದು ಬಂದಿದೆ. ಈ ಘಟನೆ ಆತ್ಮಹತ್ಯೆಯೋ ಅಥವಾ ಕೊಲೆ ಮಾದರಿಯ ಸಂಶಯಾಸ್ಪದ ಸಾವೋ ಎಂಬ ಪ್ರಶ್ನೆ ಪೊಲೀಸರ ಮುಂದೆ ನಿಂತಿದೆ. ಮಾಹಿತಿ ಪಡೆದ ಬಂಗಾರಪೇಟೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

